ಜೆಸಿಬಿ ಹರಿದು ಮನೆ ಮುಂದೆ ಆಡುತ್ತಿದ್ದ 2 ವರ್ಷದ ಮಗು ಸಾವು

ಬೆಂಗಳೂರು: ಜೆಸಿಬಿ ಹರಿದು ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವಂತಹ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್​ನಲ್ಲಿ ನಡೆದಿದೆ.

ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಬೆಳ್ಳಂದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ ಹರಿದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮಗುವನ್ನು ವೈದೇಹಿ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದು, ಆದರೆ ಮಾರ್ಗಮಧ್ಯೆಯೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮಂಗಳವಾರ ಸಂಜೆ 6.30ರ ವೇಳೆ ಮನೆಯ ಮುಂಭಾಗ ಆಟವಾಡುವ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Post a Comment

Previous Post Next Post